Browsing Tag
banjara
10 posts
ಗೋರಸೇನಾ ರಾಜ್ಯಾಧ್ಯಕ್ಷ ರವಿಕಾಂತ ಒತ್ತಾಯ: ಲಂಬಾಣಿ ಸಮಾಜದ ಅಪ್ರಾಪ್ತ ಬಾಲಕಿ ಹತ್ಯೆಗೈದ ಆರೋಪಿಗಳನ್ನು ಗಲ್ಲಿಗೇರಿಸಲು ಆಗ್ರಹ
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹುರಗಲವಾಡಿ ಗ್ರಾಮದಲ್ಲಿ ಗುಳೆಹೋದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಘಟನೆ ಅತ್ಯಂತ ಖಂಡನಾರ್ಹ. ಲಂಬಾಣಿ ಸಮಾಜದವರು ಬಹಳಷ್ಟು ಸ್ವಾಭಿಮಾನಿಗಳು. ಆದರೆ ತುತ್ತಿನ ಚೀಲ ತುಂಬಿಕೊಳ್ಳಲು ಗುಳೆಹೋಗುವುದು ನಮಗೆ ಅನಿವಾರ್ಯವಾಗಿದೆ. ಆದರೆ ಗುಳೆಹೋದಂತಹ ಸಂದರ್ಭದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ದುಷ್ಟರನ್ನು ಗಲ್ಲಿಗೇರಿಸಬೇಕು ಎಂದು ಗೋರಸೇನಾ ರಾಜ್ಯಾಧ್ಯಕ್ಷ ರವಿಕಾಂತ ಅಂಗಡಿ ಆಗ್ರಹಿಸಿದರು.
ಪತ್ರ ಚಳುವಳಿಗೆ ಕರೆ ನೀಡಿದ ಭೋವಿ ಶ್ರೀಗಳು
ಚಿತ್ರದುರ್ಗ: ಭೋವಿ, ಲಂಬಾಣಿ, ಕೊರಮ, ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡುವ ವಿಚಾರ ಈ ಸಮುದಾಯಗಳಲ್ಲಿ ಆತಂಕಕ್ಕೆ ಕಾರಣವಾಗಿದೆ.
ಈ ಕುರಿತು ರಾಜ್ಯ ಸರ್ಕಾರದ ವಿವರಣೆ ಹೀಗಿದೆ: “ಭೋವಿ, ಲಂಬಾಣಿ, ಕೊರಮ, ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡುವ ವಿಚಾರವಾಗಿ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ, ‘ಸೂಕ್ತ ಪ್ರಾಧಿಕಾರದ (NCSC) ಮುಂದೆ ಹಾಜರಾಗಲು’ ಸೂಚನೆ ನೀಡಿ, ಸರ್ವೋಚ್ಛ ನ್ಯಾಯಾಲಯ ಸದರಿ ಅರ್ಜಿಯನ್ನು 14-2-2020ರಂದು ವಿಲೇವಾರಿ ಮಾಡಿದೆ” ಎಂದು ಹೇಳಲಾಗಿದೆ.
ಜೊತೆಗೆ, “ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ, ದೆಹಲಿ, ಇವರ ಅರ್ಜಿಯನ್ನು ಸ್ವೀಕರಿಸಿ, NCSC ಇಂದ, ಮುಖ್ಯ ಕಾರ್ಯದರ್ಶಿ, ಕರ್ನಾಟಕ ಸರ್ಕಾರ, ಬೆಂಗಳೂರು. ಇವರಿಗೆ ಬರೆದ ಪತ್ರ ಸಂಖ್ಯೆ 36/inclusion & exclusion-3/2020/ssw ದಿನಾಂಕ:12-3-2020ರಲ್ಲಿ ಎಲ್ಲಿಯೂ ಕರ್ನಾಟಕ ರಾಜ್ಯದ ಭೋವಿ, ಲಂಬಾಣಿ, ಕೊರಮ ಹಾಗೂ ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಟ್ಟಿರುವ ಬಗ್ಗೆ ತಿಳಿಸಿಲ್ಲ” ಎಂದು ಹೇಳಿದೆ.