‘ಶಾಲೆ ಯಾವಾಗ ಆರಂಭಿಸೋಣ? ಪಾಲಕರ ಅಭಿಪ್ರಾಯ ಕೇಳಿ’: ರಾಜ್ಯಗಳಿಗೆ ಕೇಂದ್ರದ ತರಾತುರಿಯ ಸಂದೇಶ!

ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ವಿಭಾಗವು ಎಲ್ಲ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿ ಮತ್ತು ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳಿಗೆ ತರಾತುರಿಯಲ್ಲಿ ಒಂದು ಪತ್ರ ಕಳಿಸಿ, 3 ದಿನದಲ್ಲಿ ವಿದ್ಯಾರ್ಥಿಗಳ ಪಾಲಕರ ಅಭಿಪ್ರಾಯ ಸಂಗ್ರಹಿಸಿ, ಶಾಲೆ ಯಾವಾಗ ಆರಂಭಿಸಬೇಕು ಎಂದು ಸಲಹೆ ಪಡೆಯಿರಿ ಎಂದು ತಿಳಿಸಿದೆ. ಅಗಸ್ಟ್, ಸೆಪ್ಟೆಂಬರ್ ಅಥವಾ ಅಕ್ಟೋಬರ್ –ಯಾವ ತಿಂಗಳಲ್ಲಿ ಶಾಲೆ ಮರು ಆರಂಭವಾದರೆ ಒಳ್ಳೆಯದು ಎಂದು ಪಾಲಕರಿಂದ ತಿಳಿದುಕೊಂಡು, ಸರ್ಕಾರದ ಅಭಿಪ್ರಾಯ ರೂಪಿಸಿ ಕೂಡಲೇ ಕೇಂದ್ರಕ್ಕೆ ಕಳಿಸಿಕೊಡಿ ಎಂದು ತಿಳಿಸಿದೆ.

ಹ್ಯಾಂಡ್ ಸ್ಯಾನಿಟೈಸರ್ ಅಗತ್ಯ ವಸ್ತುವಂತೆ!: ಅದರ ಮೇಲೆ ಶೇ.18 ಜಿ.ಎಸ್.ಟಿ ಏಕಂತೆ?

ಕೇಂದ್ರ ಸರ್ಕಾರ ಹ್ಯಾಂಡ್ ಸ್ಯಾನಿಟೈಸರ್ ಅಗತ್ಯ ವಸ್ತು ಎನ್ನುತ್ತದೆ . ಆದರೆ ತೆರಿಗೆ ಇಲಾಖೆಯು ಅದನ್ನು ‘ಆಲ್ಕೊಹಾಲ್’ ಕೆಟಗರಿಗೆ ಸೇರಿಸಿ ಶೇ.18 ಜಿ.ಎಸ್.ಟಿ ತೆರಿಗೆ ಹೇರಿದ್ದನ್ನು ಸಮರ್ಥಿಸುತ್ತದೆ.

ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ಕೇಂದ್ರ ಸರ್ಕಾರದ ಅನುಮತಿ : ಸಚಿವ ಎಸ್.ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಬೆಂಗಳೂರು, ಮಂಗಳೂರು, ಹುಬ್ಬಳ್ಳಿ ಹಾಗೂ ಮೈಸೂರಿನಲ್ಲಿ ಪ್ಲಾಸ್ಮಾಥೆರಪಿ ಚಿಕಿತ್ಸೆಯನ್ನು ಪ್ರಾಯೋಗಿಕವಾಗಿ ಆರಂಭಿಸಲು ಕೇಂದ್ರ…