Browsing Tag
district
30 posts
ವಿಜಯನಗರ ಜಿಲ್ಲೆ: ಇಭ್ಭಾಗವಾಗಲಿದೆ ಮೈಸೂರು ರಾಜ್ಯದ ಗಡಿ …!
ಬಳ್ಳಾರಿ ಜಿಲ್ಲೆಯ ಗರ್ಭಸಂಜಾತ ಶಿಶುವಾಗಿ ಹುಟ್ಟಲು ವಿಜಯನಗರ ಜಿಲ್ಲೆಗೆ ಸರ್ಕಾರದಿಂದ ಅನುಮತಿ ಸಿಕ್ಕಿದೆ. ಇದು ಒಂದೆಡೆ ಸಚಿವ ಆನಂದ ಸಿಂಗ್ ರವರ ಕನಸುಗಳಿಗೆ ರೆಕ್ಕೆ ಬರಿಸಿದ್ದರೆ, ಮತ್ತೊಂದೆಡೆ ರಾಜಕೀಯ ಅಸ್ತಿತ್ವಕ್ಕಾಗಿ ಪರದಾಡುತ್ತಿದ್ದ ಆತ್ಮಗಳ ನಿದ್ದೆಗೆಡಿಸಿದೆ. ಬಳ್ಳಾರಿ ಜಿಲ್ಲೆಯ ವಿಭಜನೆಗೆ ಸಾಂಸ್ಕೃತಿಕ ಚಿಂತಕರ ಮನಸ್ಸು ಕೂಡ ಒಪ್ಪುತ್ತಿಲ್ಲವಾದರೂ, ಜಿಲ್ಲಾ ಕೇಂದ್ರ ‘ದೂರ’ ಅನ್ನುವ ಚಡಪಡಿಕೆ ಅವರ ಧ್ವನಿಯನ್ನು ಹತ್ತಿಕ್ಕಿರುವುದು ಸುಳ್ಳೇನಲ್ಲ…!
ಗದಗ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ: ಶಾಸಕರು ಹೇಳಿದರೆ ಅಕ್ರಮ ಮರಳು ಗಣಿಗಾರಿಕೆಗೆ ಅನುಮತಿ ಕೊಡ್ತಾರಾ ಅಧಿಕಾರಿಗಳು?
ಮರಳು ನೀತಿ ಅನ್ವಯ ಮರಳು ಗಣಿಗಾರಿಕೆಗೆ ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಗುತ್ತಿಗೆ ನೀಡಲಾಗಿದೆ. ಆದರೆ ಮರಳು ಗುತ್ತಿಗೆ ಪಡೆದ ಗುತ್ತಿಗೆದಾರರು ಎಗ್ಗಿಲ್ಲದೇ ಸಕ್ರಮದ ಹೆಸರಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿದ್ದಾರೆ. ಇದಕ್ಕೆ ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ ಅವರ ಪೋಷಣೆಯೂ ಇದೆ ಎನ್ನುವ ಮಾತುಗಳು ಕೇಳಲಾರಂಭಿಸಿವೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಕೊಕ್ಕರಗುಂದಿ ಬೂದಿಹಾಳ ಗ್ರಾಮದಲ್ಲಿರುವ ಕಲ್ಪವೃಕ್ಷ ಮರಳು ಗುತ್ತಿಗೆ ಪಾಯಿಂಟ್ ಇದಕ್ಕೆ ತಾಜಾ ಉದಾಹರಣೆಯಾಗಿದೆ.
ಮುಳಗುಂದ ಅಬ್ಬಿ ಕೆರೆಗೆ ಜಿಲ್ಲಾಧಿಕಾರಿ ಭೇಟಿ: ಸಾರ್ವಜನಿಕರ ಸಯೋಗದಲ್ಲಿ ಕೆರೆ ಅಭಿವೃದ್ದಿಗೆ ಸಲಹೆ.
ಪಟ್ಟಣಕ್ಕೆ ಶನಿವಾರ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅವರು ಮಳೆಯಿಂದ ಭರ್ತಿಯಾಗಿರುವ ಅಬ್ಬಿ ಕೆರೆ ವೀಕ್ಷಣೆ ಮಾಡಿದರು. ನಂತರ ಸ್ಥಳಿಯ ಮುಖಂಡರೊಂದಿಗೆ ಚರ್ಚಿಸಿದ ಅವರು ಜಿಲ್ಲೆಯಲ್ಲಿ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಕೆರೆಗಳನ್ನು ಜನಪ್ರತಿನಿಧಿಗಳು, ಸಾರ್ವಜನಿಕರು ಕೆರೆ ಅಭಿವೃದ್ದಿ ಸಮಿತಿ ರಚಿಸಿಕೊಂಡು ಕೆರೆಗಳ ಅಭಿವೃದ್ದಿಗೆ ಮುಂದಾಗಬೇಕು. ಕೆರೆಗಳ ಸಂರಕ್ಷಣೆಯಿಂದ ಅಂತರ್ಜಲ ವೃದ್ದಿಸುವುದರ ಜತೆಗೆ ರೈತರಿಗೂ ನೀರಿನ ಬವಣೆ ನೀಗಲಿದೆ. ಈಗಾಗಲೇ ಮಳೆಯಿಂದ ಕೆರೆಗಳು ಭರ್ತಿಯಾಗಿದ್ದು ಕೆರೆ ದಡದಲ್ಲಿ ಅರಣ್ಯ ಇಲಾಖೆಯ ಸಹಯೋಗದಲ್ಲಿ ಸಸಿ ನೆಡಬೇಕು ಎಂದು ಸಲಹೆ ನೀಡಿದರು.
ನೆರೆ ಸಂತ್ರಸ್ಥರ ಶಾಶ್ವತ ಪರಿಹಾರಕ್ಕೆ ಕ್ರಮಕೈಗೊಳ್ಳಿ : ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು
ಜಿಲ್ಲೆಯಲ್ಲಿ ಪ್ರತಿವರ್ಷ ಪ್ರವಾಹ ಉಂಟಾಗುತ್ತಿದ್ದು, ಇದರಿಂದ ಮಲಪ್ರಭಾ, ಬೆಣ್ಣೆಹಳ್ಳ ಹಾಗೂ ತುಂಗಭದ್ರಾ ನದಿ ಪಾತ್ರದ ಜಿಲ್ಲೆಯ ಜನರು ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತಿದ್ದಾರೆ. ಹೀಗಾಗಿ ಸಂತ್ರಸ್ಥರಿಗೆ ತಾತ್ಕಾಲಿಕ ಪರಿಹಾರ ಕಲ್ಪಿಸುವ ಬದಲಾಗಿ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಸೂಚಿಸಿದರು.