ಮತ ಎಣಿಕೆ ಕೇಂದ್ರದಲ್ಲಿ ಅಭ್ಯರ್ಥಿ ಅಸ್ವಸ್ಥ

ಗ್ರಾಮ ಪಂಚಾಯತ್ ಚುನಾವಣೆಯ‌ ಮತ ಎಣಿಕೆ ಹಿನ್ನೆಲೆ ಇಂದು ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ್ದ ಅಭ್ಯರ್ಥಿ ಅಸ್ವಸ್ಥಗೊಮಡ ಘಟನೆ ಹಾವೇರಿಯಲ್ಲಿ ನಡೆದಿದೆ.

ಮೊದಲನೇ ಹಂತದ ಚುನಾವಣೆ ಮಪತ್ರಗಳ ಸಲ್ಲಿಕೆ ಅವಧಿ ಮುಕ್ತಾಯ: ಗದಗ ಜಿಲ್ಲೆಯಲ್ಲಿ ಸಲ್ಲಿಕೆಯಾದ ಮತಪತ್ರಗಳ ವಿವರ

ಮೊದಲ ಹಂತದ ಗ್ರಾಮ ಪಂಚಾಯತ ಚುನಾವಣೆಗೆ ಅಭ್ಯರ್ಥಿಗಳಿಂದ ನಾಮಪತ್ರಗಳ ಸ್ವೀಕರಿಸುವ ಅವಧಿ ಡಿ.11 ರಂದು ಮುಕ್ತಾಯವಾಗಿದ್ದು, ಒಟ್ಟು 801 ಸ್ಥಾನಗಳಿಗೆ 1212 ಮಹಿಳೆಯರು ಸೇರಿದಂತೆ ಒಟ್ಟಾರೆ 2802 ನಾಮಪತ್ರಗಳ ಸಲ್ಲಿಕೆಯಾಗಿವೆ.

ಜಿಲ್ಲಾ ಕಸಾಪ ದಿಂದ ಕಥೆ ಹಾಗೂ ಕವನಗಳ ಆಹ್ವಾನ

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಜನೇವರಿ ತಿಂಗಳಲ್ಲಿ ಜರುಗುವ ಗದಗ ಜಿಲ್ಲಾ 9 ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಜಿಲ್ಲೆಯ ಕಥೆಗಾರರ ಹಾಗೂ ಕವಿಗಳ ಪ್ರಾತಿನಿಧಿಕ ಕಥಾ ಸಂಕಲನ ಹಾಗೂ ಕವನ ಸಂಕಲನ ಹೊರತರಲಾಗುತ್ತಿದೆ.

ವಿಜಯನಗರ ಜಿಲ್ಲೆ: ಇಭ್ಭಾಗವಾಗಲಿದೆ ಮೈಸೂರು ರಾಜ್ಯದ ಗಡಿ …!

ಬಳ್ಳಾರಿ ಜಿಲ್ಲೆಯ ಗರ್ಭಸಂಜಾತ ಶಿಶುವಾಗಿ ಹುಟ್ಟಲು ವಿಜಯನಗರ ಜಿಲ್ಲೆಗೆ ಸರ್ಕಾರದಿಂದ ಅನುಮತಿ ಸಿಕ್ಕಿದೆ. ಇದು ಒಂದೆಡೆ ಸಚಿವ ಆನಂದ ಸಿಂಗ್ ರವರ ಕನಸುಗಳಿಗೆ ರೆಕ್ಕೆ ಬರಿಸಿದ್ದರೆ, ಮತ್ತೊಂದೆಡೆ ರಾಜಕೀಯ ಅಸ್ತಿತ್ವಕ್ಕಾಗಿ ಪರದಾಡುತ್ತಿದ್ದ ಆತ್ಮಗಳ ನಿದ್ದೆಗೆಡಿಸಿದೆ. ಬಳ್ಳಾರಿ ಜಿಲ್ಲೆಯ ವಿಭಜನೆಗೆ ಸಾಂಸ್ಕೃತಿಕ ಚಿಂತಕರ ಮನಸ್ಸು ಕೂಡ ಒಪ್ಪುತ್ತಿಲ್ಲವಾದರೂ, ಜಿಲ್ಲಾ ಕೇಂದ್ರ ‘ದೂರ’ ಅನ್ನುವ ಚಡಪಡಿಕೆ ಅವರ ಧ್ವನಿಯನ್ನು ಹತ್ತಿಕ್ಕಿರುವುದು ಸುಳ್ಳೇನಲ್ಲ…!

ಜಿಲ್ಲೆಗಳಲ್ಲಿ ಎರಡು ಹಂತದಲ್ಲಿ ಗ್ರಾಪಂ ಚುನಾವಣೆ

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಡಾ.ಬಿ.ಬಸವರಾಜು ತಿಳಿಸಿದರು.

ಗದಗ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ: ಶಾಸಕರು ಹೇಳಿದರೆ ಅಕ್ರಮ ಮರಳು ಗಣಿಗಾರಿಕೆಗೆ ಅನುಮತಿ ಕೊಡ್ತಾರಾ ಅಧಿಕಾರಿಗಳು?

ಮರಳು ನೀತಿ ಅನ್ವಯ ಮರಳು ಗಣಿಗಾರಿಕೆಗೆ ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಗುತ್ತಿಗೆ ನೀಡಲಾಗಿದೆ. ಆದರೆ ಮರಳು ಗುತ್ತಿಗೆ ಪಡೆದ ಗುತ್ತಿಗೆದಾರರು ಎಗ್ಗಿಲ್ಲದೇ ಸಕ್ರಮದ ಹೆಸರಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿದ್ದಾರೆ. ಇದಕ್ಕೆ ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ ಅವರ ಪೋಷಣೆಯೂ ಇದೆ ಎನ್ನುವ ಮಾತುಗಳು ಕೇಳಲಾರಂಭಿಸಿವೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಕೊಕ್ಕರಗುಂದಿ ಬೂದಿಹಾಳ ಗ್ರಾಮದಲ್ಲಿರುವ ಕಲ್ಪವೃಕ್ಷ ಮರಳು ಗುತ್ತಿಗೆ ಪಾಯಿಂಟ್ ಇದಕ್ಕೆ ತಾಜಾ ಉದಾಹರಣೆಯಾಗಿದೆ.

ರಾಜ್ಯದ 2 ಜಿಲ್ಲೆಗಳು ಸೇರಿದಂತೆ ದೇಶದ 25 ಜಿಲ್ಲೆಗಳಲ್ಲಿಯೇ ಮಹಾಮಾರಿಗೆ ಬಲಿಯಾದವರ ಪ್ರಮಾಣ ಶೇ. 48ರಷ್ಟು!

ನವದೆಹಲಿ : ದೇಶದಲ್ಲಿ ಆರಂಭದಲ್ಲಿ ಕೊರೊನಾ ಅಟ್ಟಾಹಸವನ್ನು ಕಟ್ಟಿ ಹಾಕಿದ್ದರೂ ಆ ನಂತರ ಅದು ತನ್ನ ವ್ಯಾಪ್ತಿ ಮೀರುತ್ತಿದೆ. ಹೀಗಾಗಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ.

ದಯಾಮರಣ ಕೋರಿ ಡಿಸಿಗೆ ಲಕ್ಷ್ಮೇಶ್ವರದ ಮಾಜಿ ಸೈನಿಕ ಮನವಿ

ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಬಾಲೇಹೊಸೂರು ಗ್ರಾಮದ ಮಾಜಿ ಸೈನಿಕ ಈರಣ್ಣ ಅಣ್ಣಿಗೇರಿ ತಮಗೆ ದಯಾಮರಣ ನೀಡುವಂತೆ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಮುಳಗುಂದ ಅಬ್ಬಿ ಕೆರೆಗೆ ಜಿಲ್ಲಾಧಿಕಾರಿ ಭೇಟಿ: ಸಾರ್ವಜನಿಕರ ಸಯೋಗದಲ್ಲಿ ಕೆರೆ ಅಭಿವೃದ್ದಿಗೆ ಸಲಹೆ.

ಪಟ್ಟಣಕ್ಕೆ ಶನಿವಾರ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅವರು ಮಳೆಯಿಂದ ಭರ್ತಿಯಾಗಿರುವ ಅಬ್ಬಿ ಕೆರೆ ವೀಕ್ಷಣೆ ಮಾಡಿದರು. ನಂತರ ಸ್ಥಳಿಯ ಮುಖಂಡರೊಂದಿಗೆ ಚರ್ಚಿಸಿದ ಅವರು ಜಿಲ್ಲೆಯಲ್ಲಿ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಕೆರೆಗಳನ್ನು ಜನಪ್ರತಿನಿಧಿಗಳು, ಸಾರ್ವಜನಿಕರು ಕೆರೆ ಅಭಿವೃದ್ದಿ ಸಮಿತಿ ರಚಿಸಿಕೊಂಡು ಕೆರೆಗಳ ಅಭಿವೃದ್ದಿಗೆ ಮುಂದಾಗಬೇಕು. ಕೆರೆಗಳ ಸಂರಕ್ಷಣೆಯಿಂದ ಅಂತರ್ಜಲ ವೃದ್ದಿಸುವುದರ ಜತೆಗೆ ರೈತರಿಗೂ ನೀರಿನ ಬವಣೆ ನೀಗಲಿದೆ. ಈಗಾಗಲೇ ಮಳೆಯಿಂದ ಕೆರೆಗಳು ಭರ್ತಿಯಾಗಿದ್ದು ಕೆರೆ ದಡದಲ್ಲಿ ಅರಣ್ಯ ಇಲಾಖೆಯ ಸಹಯೋಗದಲ್ಲಿ ಸಸಿ ನೆಡಬೇಕು ಎಂದು ಸಲಹೆ ನೀಡಿದರು.

ವೀರಪ್ಪನ್ ಸಹಚರ ಸಾವು!

ಚಾಮರಾಜನಗರ ಜಿಲ್ಲೆಯ ಗಡಿಭಾಗದ ಪಾಲಾರ್ ಸಮೀಪದ ಸೋರೆಕಾಯಿಮಡುವು ಬಳಿ ನೆಲಬಾಂಬ್ ಸ್ಪೋಟಿಸಿ 22 ಜನರ ಸಾವಿಗೆ ಕಾರಣರಾಗಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಕಾಡುಗಳ್ಳ ವೀರಪ್ಪನ್ ಸಹಚರ ಬಿಲವೇಂದ್ರನ್ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ನೆರೆ ಸಂತ್ರಸ್ಥರ ಶಾಶ್ವತ ಪರಿಹಾರಕ್ಕೆ ಕ್ರಮಕೈಗೊಳ್ಳಿ : ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು

ಜಿಲ್ಲೆಯಲ್ಲಿ ಪ್ರತಿವರ್ಷ ಪ್ರವಾಹ ಉಂಟಾಗುತ್ತಿದ್ದು, ಇದರಿಂದ ಮಲಪ್ರಭಾ, ಬೆಣ್ಣೆಹಳ್ಳ ಹಾಗೂ ತುಂಗಭದ್ರಾ ನದಿ ಪಾತ್ರದ ಜಿಲ್ಲೆಯ ಜನರು ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತಿದ್ದಾರೆ. ಹೀಗಾಗಿ ಸಂತ್ರಸ್ಥರಿಗೆ ತಾತ್ಕಾಲಿಕ ಪರಿಹಾರ ಕಲ್ಪಿಸುವ ಬದಲಾಗಿ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಸೂಚಿಸಿದರು.

ಗದಗ ಜಿಲ್ಲೆಗೂ ಒಂದು ವಾರದ ಲಾಕ್ಡೌನ್?

ಸಿಎಂ ಯಡಿಯೂರಪ್ಪ ಸೋಂಕು ಹೆಚ್ಚುತ್ತಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡೀಯೋ ಸಂವಾದ ನಡೆಸುತ್ತಿದ್ದಾರೆ. ಅಭಿಪ್ರಾಯ ಆಧರಿಸಿ ಲಾಕ್ ಡೌನ್ ಜಾರಿ ಮಾಡಬಹುದು ಎನ್ನಲಾಗಿದೆ.