Browsing Tag
former
17 posts
ನನ್ನ ಕೈಯಲ್ಲಿ ಅಧಿಕಾರ ಇದ್ದಿದ್ರೆ ಎಲ್ಲವನ್ನು ಬರೆದುಕೊಡ್ತಿದ್ದೆ ಅಂತ ನಟ ಶಿವಣ್ಣ ಹೇಳಿದ್ದು ಯಾಕೆ?
ರೈತರು ಬೀದಿಯಲ್ಲಿ ಕೂತು ಊಟ ಮಾಡ್ತಿರೋದು ನೋಡುವಾಗೆಲ್ಲಾ ಹೊಟ್ಟೆ ಉರಿಯುತ್ತೆ. ನಮ್ಮ ಸಮಸ್ಯೆಗಳನ್ನೇ ನಾವು ಪರಿಹಾರ ಪಡಿಸಿಕೊಳ್ಳೋಕೆ ಆಗುತ್ತಿಲ್ಲ. ನಮ್ಮ ಕೈಯಲ್ಲಿ ಏನೂ ಇಲ್ಲ. ರೈತರಿಗೆ ನಮ್ಮ ಬೆಂಬಲ ಖಂಡಿತಾ ಇದ್ದೇ ಇರುತ್ತೆ. ಆದರೆ ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಿದೆ. ನನ್ ಕೈಯಲ್ಲಿ ಅಧಿಕಾರ ಇದ್ದಿದ್ರೆ ಎಲ್ಲವನ್ನೂ ಬರೆದುಕೊಡುತ್ತಿದ್ದೆ. ಆದ್ರೆ ಅಧಿಕಾರ ನನ್ನ ಕೈಯಲ್ಲಿ ಇಲ್ವಲ್ಲಾ ಎಂದು ಹ್ಯಾಟ್ರಿಕ್ ಹಿರೋ ಶಿವರಾಜಕುಮಾರ ಬೇಸರ ವ್ಯಕ್ತಪಡಿಸಿದ್ದಾರೆ.
ಮಾವು ಬೆಳೆಗೆ ಬೂದು ರೋಗ: ನಿಯಂತ್ರಣ ಹಾಗು ಮುಂಜಾಗೃತೆ ಕ್ರಮಗಳು
ಪ್ರಸ್ತುತ ಮೋಡಕವಿದ ವಾತಾವರಣ, ಕಡಿಮೆ ಉಷ್ಣಾಂಶ ಉಷ್ಣಾಂಶ ಮತ್ತು ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಂಭವ ಹೆಚ್ಚಾಗಿರುವುದರಿಂದ, ಇಂತಹ ಹವಾಮಾನದಲ್ಲಿ ಈಗಾಗಲೇ ಬಿಟ್ಟಿರುವ ಹೂ ಅರಳುವಾಗ ಅತಿಯಾದ ಚಳಿ ಇರುವುದರಿಂದ ಅಂತಹ ಸಮಯದಲ್ಲಿ ಪರಾಗ ಸ್ಪರ್ಶಕ್ಕೆ ಬರುವ ಕೀಟಗಳ ಸಂಖ್ಯೆ ತುಂಬಾ ವಿರಳ. ಒಂದು ವೇಳೆ ಈ ಹೂಗಳನ್ನು ಉಳಿಸಿಕೊಳ್ಳಲು ಹೆಚ್ಚೆಚ್ಚು ಸಿಂಪರಣೆ ಕೈಗೊಂಡರೂ ಸಹ ಕಾಯಿ ಕಚ್ಚುವ ಪ್ರಮಾಣ ತೀರಾ ಕಡಿಮೆಯಿದ್ದು, ಕಾಯಿ ಬೆಳೆವಣಿಗೆಗೆ ಪೂರಕವಾದ ಉಷ್ಣಾಂಶದ ಕೊರತೆಯಿಂದಾಗಿ ಉತ್ತಮ ಗುಣಮಟ್ಟದ ಇಳುವರಿ ಪಡೆಯಲು ಹಾಗೂ ಹೆಚ್ಚಿನದಾಗಿ ರೈತರು ಆದಾಯ ಗಳಿಸಿಕೊಳ್ಳಲು ಸಾದ್ಯವಾಗುವುದಿಲ್ಲ.
ಗಜೇಂದ್ರಗಡದಲ್ಲಿ ಮುಷ್ಕರ: ಪೊಲೀಸ್-ಪ್ರತಿಭಟನಾಕಾರರ ಮದ್ಯೆ ಮಾತಿನ ಚಕಮಕಿ
ರೈತ, ಕಾರ್ಮಿಕ, ವಿದ್ಯುತ್, ಎಪಿಎಂಸಿ ಕಾಯ್ದೆ, ಬೆಲೆ ನಿಯಂತ್ರಣ ಕಾಯ್ದೆ, ಭೂ ಸುಧಾರಣೆ ಕಾಯ್ದೆ ಸೇರಿದಂತೆ ಜನ ವಿರೋದಿ ನೀತಿ ಖಂಡಿಸಿ ರಾಷ್ಟ್ರವ್ಯಾಪಿ, ಕಾರ್ಮಿಕ, ರೈತ ಹಾಗೂ ವಿವಿಧ ಸಂಘಟನೆಗಳು ಕರೆ ನೀಡಿರುವ ಮುಷ್ಕರದ ಅಂಗವಾಗಿ ಗದಗ ಜಿಲ್ಲೆ ಗಜೇಂದ್ರಗಡದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.