ಬೆಂಬಲ ಬೆಲೆಯಲ್ಲಿ ಸರ್ಕಾರ ಗೋವಿನ ಜೋಳ ಖರೀದಿಸಲು ರೈತರ ಆಗ್ರಹ
ತಾನು ಬೆಳೆದ ಬೆಳೆ ತನ್ನ ಬದುಕು ಬಂಗಾರವಾಗಿಸುತ್ತದೆ ಎಂದು ನಂಬಿದ ಅನ್ನದಾನಿಗೆ ಭಾರಿ ನಿರಾಶೆಯಾಗಿದೆ. ಬಿಳಿ ಗೋವಿನ ಜೋಳ ಬದುಕಿನಲ್ಲಿ ಬೆಳಕು ಚೆಲ್ಲುತ್ತೆ ಎಂಬ ವಿಶ್ವಾಸದಲ್ಲಿ ರೈತನಿಗೆ ಬಿಳಿ ಗೋವಿನ ಜೋಳ ಕೂಡ ಉತ್ತಮ ಧಾರಣೆ ನೀಡದ ಹಿನ್ನೆಲೆ ಬದುಕಿಗೆ ಕತ್ತಲೆ ಆವರಿಸಿದಂತಾಗಿದೆ. ಇದರಿಂದ ಉತ್ತಮ ಧಾರಣೆಯ ನಿರೀಕ್ಷೆಯಲ್ಲಿದ್ದ ರೈತರು ಅಸಹಾಯಕರಾಗಿ ಕೈಚೆಲ್ಲಿ ಕುಳಿತಿದ್ದಾರೆ.