ತುರ್ತು ವಾಹನ ಸೇವೆ ಒದಗಿಸಿ ಜನರಿಂದ ಸೈ ಎನಿಸಿಕೊಂಡ ಗ್ರಾಪಂ ಸದಸ್ಯ ಜಹೀರ್

ಮುಂಡರಗಿ: ಕೊರೊನಾದ ಈ ಸಂಕಷ್ಟದಲ್ಲಿ ಜನಸಾಮಾನ್ಯರ ಬದುಕು ತೀರಾ ಸಂಕಷ್ಟಕ್ಕೀಡಾಗಿದೆ. ಇಂತಹ ಸಂದರ್ಭದಲ್ಲಿ ಜನರ ನೆರವಿಗೆ ಧಾವಿಸುವ ಮೂಲಕ ಗ್ರಾಮ ಪಂಚಾಯತಿ ಸದಸ್ಯನೊಬ್ಬ ಸೇವಾ ಕಾರ್ಯಕ್ಕೆ ಅಣಿಯಾಗಿದ್ದಾರೆ. ಹೌದು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮ ಪಂಚಾಯತಿ ಸದಸ್ಯ ಜಹೀರುದ್ದೀನ್ ಮುಲ್ಲಾ, ಗ್ರಾಮದಲ್ಲಿ ಉಚಿತ ತುರ್ತು ಸೇವಾ ವಾಹನದ ವ್ಯವಸ್ಥೆಯನ್ನು ಮಾಡಿದ್ದಾರೆ.