ಗೋರಸೇನಾ ರಾಜ್ಯಾಧ್ಯಕ್ಷ ರವಿಕಾಂತ ಒತ್ತಾಯ: ಲಂಬಾಣಿ ಸಮಾಜದ ಅಪ್ರಾಪ್ತ ಬಾಲಕಿ ಹತ್ಯೆಗೈದ ಆರೋಪಿಗಳನ್ನು ಗಲ್ಲಿಗೇರಿಸಲು ಆಗ್ರಹ
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹುರಗಲವಾಡಿ ಗ್ರಾಮದಲ್ಲಿ ಗುಳೆಹೋದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಘಟನೆ ಅತ್ಯಂತ ಖಂಡನಾರ್ಹ. ಲಂಬಾಣಿ ಸಮಾಜದವರು ಬಹಳಷ್ಟು ಸ್ವಾಭಿಮಾನಿಗಳು. ಆದರೆ ತುತ್ತಿನ ಚೀಲ ತುಂಬಿಕೊಳ್ಳಲು ಗುಳೆಹೋಗುವುದು ನಮಗೆ ಅನಿವಾರ್ಯವಾಗಿದೆ. ಆದರೆ ಗುಳೆಹೋದಂತಹ ಸಂದರ್ಭದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ದುಷ್ಟರನ್ನು ಗಲ್ಲಿಗೇರಿಸಬೇಕು ಎಂದು ಗೋರಸೇನಾ ರಾಜ್ಯಾಧ್ಯಕ್ಷ ರವಿಕಾಂತ ಅಂಗಡಿ ಆಗ್ರಹಿಸಿದರು.