ಸೇಡಿನ ಕೊಲೆಗಳಲ್ಲಿ ದೇಶದಲ್ಲಿಯೇ ಬೆಂಗಳೂರು ಮೊದಲ ಸ್ಥಾನದಲ್ಲಿ!
ಬೆಂಗಳೂರು : ದೇಶದಲ್ಲಿ ದ್ವೇಷದಿಂದ ಕೊಲೆಗಳು ಹೆಚ್ಚಾಗುತ್ತಿದ್ದು, ಆತಂಕ ಮನೆ ಮಾಡುತ್ತಿದೆ.
ಹೀಗೆ ಸೇಡಿನ ಕೊಲೆಗಳು ನಡೆದಿರುವ ಪಟ್ಟಿಯಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿ ಬಂದು ನಿಂತಿದೆ.
ಆಸ್ತಿ ವಿವಾದ ಕೊಲೆಯಲ್ಲಿ ಅಂತ್ಯವಾದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಮೇ. 15ರಂದು ಈ ಕೊಲೆ ನಡೆದಿದ್ದು, ಕೊಲೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಉಮೇಶ್ ಬಾಳಗಿ (39) ಕೊಲೆಯಾದ ವ್ಯಕ್ತಿ. ಚೆನ್ನಬಸಪ್ಪ ಬಾಳಗಿ ಮತ್ತು ಬಸಪ್ಪ ಬಾಳಗಿ ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ನಗರದಲ್ಲಿ ದಂಪತಿಯ ಹತ್ಯೆ ನಡೆದಿದ್ದು, ಮಗನಿಂದಲೇ ನಡೆದಿದೆ ಎನ್ನಲಾಗಿದೆ. ಕೋಣನಕುಂಟೆ ಬಳಿಯ ಆರ್ ಬಿಐ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಗೋವಿಂದಪ್ಪ(65), ಶಾಂತಮ್ಮ(55) ಕೊಲೆಯಾದ ದುರ್ದೈವಿಗಳು. ಇವರನ್ನು ಟೆಕ್ಕಿಯಾಗಿರುವ ಮಗ ನವೀನ್ ಕೊಲೆಗೈದಿರಬಹುದು ಎಂಬ ಶಂಕಿಸಲಾಗಿದೆ.