ನೇಪಾಳ ಮತ್ತು ಲಂಕಾದಲ್ಲಿ ಇಂಧನ ಬೆಲೆ ಅಗ್ಗವೇಕೆ: ವಿಶ್ವಂಭರ ಪ್ರಸಾದ್

ಸೀತೆಯ ನೇಪಾಳ ಹಾಗೂ ರಾವಣನ ಲಂಕಾದಲ್ಲಿ ಪೆಟ್ರೋಲ್ ದರ ಏಕೆ ಅಗ್ಗವಾಗಿದೆ ಎಂದು ಸಮಾಜವಾದಿ ಪಕ್ಷದ ಸಂಸದ ವಿಶ್ವಂಭರ ಪ್ರಸಾದ್ ನಿಶಾದ್ ಬುಧವಾರ ರಾಜ್ಯಸಭೆಯಲ್ಲಿ ಪ್ರಶ್ನೆ ಮಾಡಿದರು. ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಪ್ರಶ್ನಿಸಿದ ವಿಶ್ವಂಭರ ಪ್ರಸಾದ್, ಪೆಟ್ರೋಲ್ ದರವು ಸೀತಾ ಮಾತೆಯ ನೇಪಾಳ ಹಾಗೂ ರಾವಣರ ಲಂಕಾದಲ್ಲಿ ಅಗ್ಗವಾಗಿದೆ. ಹಾಗಿದ್ದರೆ ರಾಮ ಜನ್ಮಭೂಮಿ ಭಾರತದಲ್ಲಿ ಯಾವಾಗ ಕಡಿಮೆ ಮಾಡುತ್ತೀರಿ? ಎಂದು ಕೇಳಿದರು.

‘ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಶ್ರೀರಾಮ ಭಾರತೀಯನಲ್ಲ, ನೇಪಾಳಿ’ : ನೇಪಾಳ ಪ್ರಧಾನಿ ಕಿಡಿ

‘ನಿಜವಾದ ಅಯೋಧ್ಯೆ ಇರುವುದು ಭಾರತದಲ್ಲಲ್ಲ ನೇಪಾಳದಲ್ಲಿ. ದೇವರು ರಾಮ ಭಾರತೀಯನಲ್ಲ, ನೇಪಾಳಿ’ ಎಂದು ನೇಪಾಳ ಪ್ರಧಾನಿ ಪ್ರತಿಪಾದಿಸಿದ್ದಾರೆ.