ರಾಜ ಕಾಲುವೆ ಮತ್ತು ಚರಂಡಿ ಸ್ವಚ್ಛತೆಯ ಕಾರ್ಯದ ಕ್ರಿಯಾ ಯೋಜನೆ ಪ್ರಕಟ

ಗದಗ: ಗದಗ ಬೆಟಗೇರಿ ನಗರದ ವಿವಿಧ ವಾರ್ಡುಗಳಲ್ಲಿರುವ ಮಳೆಗಾಲದಲ್ಲಿ ಮಳೆ ನೀರಿನಿಂದ ತುಂಬಿ ಹರಿಯುವ ನಾಲಾ ಮತ್ತು ಚರಂಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯಕ್ರಮ ಮುಂಜಾಗೃತಾ ಕ್ರಮವಾಗಿ ಆಡಳಿತಾಧಿಕಾರಿಗಳ ನಿರ್ದೇಶನದಂತೆ ಜೂನ್ 3 ರಂದು ಪರಿಸರ ಅಭಿಯಂತರರು, ಹಿರಿಯ ಆರೋಗ್ಯ ನಿರೀಕ್ಷಕರು, ಆಯಾ ವಾರ್ಡುಗಳ ಸೂಪರ್‌ವೈಸರ್‌ಗಳ ಸಭೆ ಕರೆದು ಸಭೆಯಲ್ಲಿ ನಗರದ ಮುಖ್ಯ ನಾಲಾಗಳು ದೊಡ್ಡ ಚರಂಡಿಗಳು ಮತ್ತು ಮುಖ್ಯ ರಸ್ತೆಯ ಚರಂಡಿಗಳು ಹಾಗೂ ವಿವಿಧ ವಾರ್ಡಗಳಲ್ಲಿ ಮಳೆಯಿಂದ ತುಂಬಿ ಹರಿಯುವ ಚರಂಡಿಗಳನ್ನು ಸ್ವಚ್ಛತೆ ಮಾಡಿಸುವ ಕುರಿತು ಚರ್ಚಿಸಲಾಯಿತು.