ಪಾರದರ್ಶಕ ಕನ್ನಡ ಸಾಹಿತ್ಯ ಪರಿಷತ್ತು ನಿರ್ಮಾಣವೇ ನನ್ನ ಗುರಿ : ರಾಜಶೇಖರ ಮುಲಾಲಿ

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಬ್ರಷ್ಟಾಚಾರ ಬೇರೂರಿದ್ದು, ಸಂಪೂರ್ಣವಾಗಿ ತೊಡೆದು ಹಾಕು ಕೆಲಸವಾಗಬೇಕಿದೆ. ಆದ್ದರಿಂದ ಈ ಬಾರಿ ಕರ್ನಾಟಕ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಗೆ ಉತ್ತರ ಕರ್ನಾಟಕದಿಂದ ನಾನು ಕೂಡ ಸ್ಪರ್ಧಿಸಲಿದ್ದೇನೆ ಎಂದು ಅಣ್ಣಾ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ, ಭ್ರಷ್ಟಾಚಾರ ವಿರೋಧಿ ಮತ್ತು ಸಾಮಾಜಿ ಹೋರಾಟಗಾರ ರಾಜಶೇಖರ ಮುಲಾಲಿ ಹೇಳಿದರು.