ಮಹಾಶಕ್ತಿ ಕೇಂದ್ರ ಅಧ್ಯಕ್ಷರಾಗಿ ನಾಗರಾಜ ಯಂಬಲದ ಆಯ್ಕೆ

ಮಸ್ಕಿ: ನಗರದ ಮಹಾಶಕ್ತಿ ಕೇಂದ್ರ ಅಧ್ಯಕ್ಷವನ್ನಾಗಿ ಆಯ್ಕೆಯಾದ ನಾಗರಾಜ ಯಂಬಲದ ಅವರಿಗೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಅವರು ಸನ್ಮಾನಿಸಿದರು.

ಕಸಾಪ ವತಿಯಿಂದ ಕವಿ-ಬರಹಗಾರರ ಪ್ರೋತ್ಸಾಹ ವೇದಿಕೆ

ತಾಲ್ಲೂಕ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನೂತನ ತಾಲ್ಲೂಕಿಗೆ ಒಳಪಡುವ ಕವಿಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ, ಬರಹಗಾರರ ಸೃಜನಶೀಲತೆಯನ್ನು ಹೆಚ್ಚಿಸಲು ತಾಲ್ಲೂಕ ಮಟ್ಟದ ಕವನ ಸಂಕಲನವನ್ನು ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಘನಮಠದಯ್ಯಸ್ವಾಮಿ ಸಾಲಿಮಠ ತಿಳಿಸಿದ್ದಾರೆ.

ಮಸ್ಕಿ: ಚನ್ನಬಸವ ಕುಟುಂಬಕ್ಕೆ ಸಹಾಯಧನ ವಿತರಣೆ

ಹಳ್ಳದ ಪ್ರವಾಹದಲ್ಲಿ ಕೊಚ್ಚಿ ಹೋದ ಚನ್ನಬಸವ ಮಡಿವಾಳ ಅವರ ಮನೆಗೆ ತುಂಗಾಭದ್ರ ಕಾಡಾ ಅಧ್ಯಕ್ಷ ಆರ್ ಬಸನಗೌಡ ತುರವಿಹಾಳ ಅವರ ಭೇಟಿ ನೀಡಿ ಅವರ ಕುಟುಂಬಕ್ಕೆ 50 ಸಾವಿರ ಸಹಾಯಧನ ನೀಡಿದರು. ಬಳಿಕ‌ ಆರ್ ಬಸನಗೌಡ ತುರವಿಹಾಳ ಅವರು ಮಾತನಾಡಿ, ಚನ್ನಬಸವನನ್ನು ಹುಡಕಲು ತಾಲೂಕ ಆಡಳಿತ ಸಾಕಷ್ಟು ಪ್ರಯತ್ನ ಪಟ್ಟಿದೆ. ಆದರೂ ಅವರ ದೇಹ ಸಿಗಲಿಲ್ಲ. ಈ ಕುರಿತು ರಾಜ್ಯ ಸರಕಾರ ಗಮನಕ್ಕೆ ತಂದು ಸೂಕ್ತ ಪರಿಹಾರ ನೀಡಲು ಒತ್ತಾಯ ಮಾಡುತ್ತೇನೆ ಎಂದರು.

ಮಳೆಗೆ ವೆಂಕಟಾಪೂರ ರಸ್ತೆ ಸಂಪೂರ್ಣ ಕಡಿತ

ಮಸ್ಕಿ: ಶುಕ್ರವಾರ ರಾತ್ರಿ ಸುರಿದ ಮಳೆಗೆ ಕಿರು ಹಳ್ಳ ಹರಿದು ಬಂದು ವೆಂಕಟಾಪೂರ ರಸ್ತೆ ಕಡಿತವಾಗಿದೆ. ಈ ರಸ್ತೆ ಮಾರ್ಗದಲ್ಲಿ ಕಿರು ಹಳ್ಳ ಹರಿದು ಡಾಂಬರ್ ರಸ್ತೆ ಕಿತ್ತು ಹೋಗಿ ರಸ್ತೆ ಸಂಪೂರ್ಣ ಕಡಿತವಾಗಿದೆ. ಈಚೆಗೆ ಮಸ್ಕಿ ಪಟ್ಟಣದಿಂದ ವೆಂಕಟಾಪೂರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ಡಾಂಬರೀಕರಣ ಮಾಡಲಾಗಿತ್ತು, ಕಾಮಗಾರಿ ಕೈಗೊಳ್ಳುವ ವೇಳೆಯಲ್ಲಿ ಹಳ್ಳ ಬರುವ ಜಾಗದಲ್ಲಿ ಕಿರು ಸೇತುವೆ ನಿರ್ಮಿಸಬೇಕೆಂಬ ಪರಿಜ್ಞಾನ ಗುತ್ತಿಗೆದಾರ ಹಾಗೂ ಅಧಿಕಾರಿಗಳಿಗೆ ಇಲ್ಲವೇ ಎಂದು ಸಾರ್ವಜನಿಕರು ದೂರಿದ್ದಾರೆ.

ಶಾಸಕರಿಗಿಂತ ಹಿಂಬಾಲಕನದ್ದೆ ಆವಾಜ್…! ಬಸವಂತರಾಯ್ ವಿರುದ್ಧ ಜನರ ಆಕ್ರೋಶ

ರಾಯಚೂರು: ಮಸ್ಕಿ ವಿಧಾನಸಭೆ ಕ್ಷೇತ್ರದ ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ ಅವರ ಹಿಂಬಾಲಕ ಬಸವಂತರಾಯ್ ಕುರಿ…

ಮಸ್ಕಿಗೆ ಮೂಲಭೂತ ಸೌಕರ್ಯ ಮರೀಚಿಕೆ..!

ಜಿಲ್ಲೆಯ ಮಸ್ಕಿ ಪಟ್ಟಣ ತಾಲೂಕು ಕೇಂದ್ರವಾಗಿ ಎರಡು ವರ್ಷ ಉರುಳುತ್ತಿದ್ದರು. ಇಲ್ಲಿನ ಮೂಲಭೂತ ಸೌಕರ್ಯಗಳು ಸಾರ್ವಜನಿಕರಿಗೆ ದೊರೆಯುತ್ತಿಲ್ಲ. ಇದಕ್ಕೆ ಉತ್ತಮ ಉದಾಹರಣೆ ಇಲ್ಲಿದೆ ನೋಡಿ…

ಕೊರೊನಾ ವಾರಿಯರ್ಸ್ ಗೆ ಸಿಗದ ಸಂಬಳ!

ಕೊರೊನಾ ವಿರುದ್ಧ ಆರೋಗ್ಯ ಇಲಾಖೆ ಸಿಬ್ಬಂದಿಗಳು ಹೋರಾಡುತ್ತಿದ್ದಾರೆ. ಆದರೆ, ಇವರ ಸಂಬಳಕ್ಕೆ ಕತ್ತರಿ ಹಾಕಿರುವುದು ಬೆಳಕಿಗೆ ಬಂದಿದೆ.

ಎಪಿಎಂಸಿ ಚೆಕ್‌ಪೊಸ್ಟ್ ನಲ್ಲಿ ಹಣ ವಸೂಲಿ ದಂಧೆ?

ಎಪಿಎಂಸಿ ಚೆಕ್‌ಪೊಸ್ಟ್ನಲ್ಲಿ ವಾಹನ ತಪಾಸಣೆ ಹೆಸರಿನಲ್ಲಿ ಭಾರಿ ಪ್ರಮಾಣದಲ್ಲಿ ಹಣ ವಸೂಲಿ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.