ಪಡಿತರ ಚೀಟಿದಾರರಿಗೆ ರಾಗಿ, ಜೋಳ, ತೊಗರಿ, ಹೆಸರುಕಾಳು ವಿತರಣೆ

ಪಡಿತರ ಚೀಟಿದಾರರಿಗೆ ಸರ್ಕಾರ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಇನ್ಮುಂದೆ ರಾಗಿ, ಜೋಳ, ತೊಗರಿ ಹಾಗೂ ಹೆಸರು ಕಾಳುಗಳನ್ನು ಖರೀದಿಸಿ ನ್ಯಾಯಬೆಲೆ ಅಂಗಡಿ ಮೂಲಕ ವಿತರಿಸಲು ಕ್ರಮಕೈಗೊಳ್ಳಲು ಸರ್ಕಾರ ಮುಂದಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ವಿ. ಕತ್ತಿ ತಿಳಿಸಿದ್ದಾರೆ.

ಕತ್ತಿ ವರಸೆಗೆ ಶಾಕ್ ಕೊಟ್ರು ಸಿಎಂ..!

ಇತ್ತೀಗಷ್ಟೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಶಾಸಕ ಉಮೇಶ್ ಕತ್ತಿ, ಡಿನ್ನರ್ ಪಾಲಿಟಿಕ್ಸ್ ನಡೆಸಿದ್ರು. ಇದರಲ್ಲಿ ಕೆಲವು ಅತೃಪ್ತ ಶಾಸಕರು ಭಾಗವಹಿಸಿದ್ದು ಬಿಜೆಪಿಯಲ್ಲಿ ಕುಚ್… ಕುಚ್ ಹೋ ರಹಾ ಹೈ ಎಂಬ ಚರ್ಚೆಗೆ ಮುನ್ನುಡಿ ಬರೆದಿತ್ತು. ಉಮೇಶ್ ಕತ್ತಿ ಮನೆಯಲ್ಲಿ ಶೀಕರಣಿ ಊಟದ ರಾಜಕಾರಣದ ಬೆನ್ನಲ್ಲೆ ಸಿಎಂ ಬಿಎಸ್ವೈ ಪರ ಹಾಗೂ ವಿರೋಧ ಚರ್ಚೆಗಳು ನಡೆದವು. ಇದು ಸ್ವತ: ಸಿಎಂ ಯಡಿಯೂರಪ್ಪ ಅವರಿಗೂ ಮುಜುಗುರ ತಂದಿರಬಹುದು. ಆದರೆ ಬಿಎಸ್ವೈ ಹೈಕಮಾಂಡ್ ಮಟ್ಟದಲ್ಲಿ ಇನ್ನು ಪವರ್ ಫುಲ್ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಇದಕ್ಕೆ ಇಂದು ಜಿಲ್ಲಾ ಉಸ್ತುವಾರಿ ಸಚಿವರ ನೇಮಕವೇ ಸಾಕ್ಷಿಯಾಗಿದೆ.