ವೀರಪ್ಪನ್ ಪುತ್ರಿಯೀಗ ಬಿಜೆಪಿ ಯುವ ಘಟಕದ ಉಪಾಧ್ಯಕ್ಷೆ

ಕುಖ್ಯಾತ ದಂತಚೋರ ವೀರಪ್ಪನ್ ಪುತ್ರಿ ವಿದ್ಯಾರಾಣಿಯನ್ನು ತಮಿಳುನಾಡು ಬಿಜೆಪಿ ಯುವ ಘಟಕದ ಉಪಾಧ್ಯಕ್ಷೆಯನ್ನಾಗಿ ನೇಮಕ ಮಾಡಲಾಗಿದೆ. ಕಳೆದ ಫೆಬ್ರವರಿಯಲ್ಲಿ ವಿದ್ಯಾರಾಣಿ ಬಿಜೆಪಿಗೆ ಸೇರಿದ್ದರು. ಈ ಕುರಿತು ಮಾತನಾಡಿರುವ ವಿದ್ಯಾರಾಣಿ, ಸಾಮಾಜಿಕ ಕೆಲಸ ಮಾಡುವುದು ನನ್ನ ಗುರಿ. ಯಾವುದೇ ಒಂದು ಸಮುದಾಯದ ಜೊತೆಗೆ ಗುರುತಿಸಿಕೊಳ್ಳುವುದಿಲ್ಲ. ಮಾನವೀಯತೆಯೇ ಮುಖ್ಯ’ ಎಂದಿದ್ದಾರೆ.