ಇಂಧನ ಬೆಲೆ ಮತ್ತು ಹಣದ ಮೌಲ್ಯ ಒಂದೇ ನಾಣ್ಯದ ಮುಖಗಳು

ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಘೋಷಣೆಯಾದ ಬೆನ್ನಲ್ಲೇ ಇಂಧನ ದರ ಏರಿಕೆ ಆರಂಭಗೊAಡಿದೆ. ಯಾವುದೇ ಚುನಾವಣೆ ನಂತರ ಇಂಧನ ಬೆಲೆ ಏರಿಸುವದು ಸಾಮಾನ್ಯ. ಈ ಸಂಪ್ರದಾಯ ಇಂದು-ನಿನ್ನೆಯದಲ್ಲ, ಹಲವು ದಶಕಗಳ ಸಂಪ್ರದಾಯ ಈಗಲೂ ಅಷ್ಟೇ ಅಚ್ಚು ಕಟ್ಟಾಗಿ ಎಲ್ಲಾ ಸರ್ಕಾರಗಳು ಪಾಲಿಸುತ್ತಿವೆ.

ಅಬ್ಬಿಗೇರಿ: ಕಠಿಣ ಲಾಕ್ಡೌನ್ ಮನೆ ಮನೆಗೆ ಪಡಿತರ

ನರೇಗಲ್: ಕೊರೊನಾ ಎರಡನೇ ಅಲೆಯನ್ನು ತಡೆಗಟ್ಟಲು ಜಿಲ್ಲಾಡಳಿತ 5 ದಿನದವರೆಗೂ ಕಠಿಣ ಲಾಕ್ಡೌನ್ ವಿಧಿಸಿದ ಪರಿಣಾಮ, ಸಮೀಪದ ಅಬ್ಬಿಗೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪಡಿತರನ್ನು ಮನೆ ಮನೆಗೆ ತಲುಪಿಸುವ ಕಾರ್ಯ ಕೈಗೊಂಡರು. ಗ್ರಾಮದಲ್ಲಿನ ಸಂಘದ ಪಡಿತರ ಚೀಟಿ ಇರುವ ಮನೆಮನೆಗೆ ತೆರಳಿ ಗ್ರಾಹಕರ ಪಡಿತರವನ್ನು ಸ್ಥಳದಲ್ಲಿಯೇ ತೂಕ ಮಾಡಿ ಹಂಚಿಕೆ ಮಾಡಲಾಗುತ್ತಿದೆ,ಕಠಿಣ ಲಾಕ್ಡೌನ್ ನಿಂದ ಜನರು ಹೊರಗಡೆ ಬರಲು ಆಗದ ಕಾರಣ ಗ್ರಾಮ ಪಂಚಾಯತಿ ಯವರು ಪಡಿತರವನ್ನು ಮನೆ ಮನೆಗೆ ಹಂಚುತ್ತಿರುವುದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.